ಹಾಸನ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪಟೇಲ್ ಶಿವಪ್ಪ ಅವರಿಗೆ ಇದೇ ತಿಂಗಳ 26 ರಂದು ನಗರದ ಕನಕ ಭವನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಸಿದ್ದೇಗೌಡ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ತಾಲೂಕು-ಜಿಲ್ಲಾ ಕುರುಬರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರುತ್ತಿದ್ದು, ಕಾಗಿನೆಲೆ ಕನಕ ಗುರು ಪೀಠದ ಕೆ.ಆರ್.ನಗರ ಶಾಖಾ ಮಠದ ಶ್ರೀ ಶಿವಾನಂದಪುರಿ ಮಹಾಸ್ವಾಮೀಜಿಗಳ ಕೃಪಾಶೀರ್ವಾದಗಳೊಂದಿಗೆ ಸಮಾರಂಭ ನಡೆಯಲಿದೆ.
ಜಿಲ್ಲೆಯ ಸಮುದಾಯದ ಎಲ್ಲ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು. ತಾಲೂಕು ಸಂಘದ ವಿವಿಧ ಪದಾಧಿಕಾರಿಗಳು ಇದ್ದರು.










