ಮಂಡ್ಯ: ತಾಲೂಕಿನ ಗೊರವಾಲೆ ಗ್ರಾಮದ ಸಮೀಪ ಬುಧವಾರ ಬೆಳಗ್ಗೆ ಜಮೀನಿನಲ್ಲಿ ಸೊಪ್ಪು ಕತ್ತರಿಸುವ ವೇಳೆ ಹುಲಿ ದಾಳಿ ನಡೆಸಿ ಕೃಷಿ ಕೆಲಸಗಾರರನ್ನು ದಾಳಿ ನಡೆಸಿದೆ.
ಗ್ರಾಮದ ತಿರುಮಲೆ (60) ಎಂಬಾತನ ಮೇಲೆ ದಾಳಿ ನಡೆಸಿದೆ. ಈತ ಕಳೆದ 15 ವರ್ಷದಿಂದ ಸ್ಥಳೀಯರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದರಂತೆ ಆಡುಗಳಿಗೆ ಸೊಪ್ಪು ಕತ್ತರಿಸುತ್ತಿದ್ದಾಗ ಏಕಾಏಕಿ ಹುಲಿ ದಾಳಿ ನಡೆಸಿದೆ.
ಇದರಿಂದ ಗಾಬರಿಗೊಂಡ ತಿರುಮಲೆ, ಕೂಡಲೇ ಕಿರುಚಿಕೊಂಡು ಕೈಯಲ್ಲಿದ್ದ ಕುಡುಗೋಲಿನಿಂದ ಹುಲಿ ಮೇಲೆ ಪ್ರತಿ ದಾಳಿ ನಡೆಸಲು ಮುಂದಾಗಿದ್ಧಾರೆ. ಅಷ್ಟರಲ್ಲಿ ಸ್ಥಳೀಯರು ಅತ್ತ ದೌಡಾಯಿಸಿದಾಗ ಹುಲಿಯು ಅಲ್ಲಿಂದ ಕಣ್ಮರೆಯಾಗಿದೆ ಎಂದು ಹೇಳಲಾಗುತ್ತಿದೆ.
ದಾಳಿಯಿಂದ ತಿರುಮಲೆ ಅವರ ಬಲ ತೊಡೆ, ಬಲಗೈ ಮೇಲೆ ಗಾಯಗಳು ಉಂಟಾಗಿವೆ. ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ










