ಚನ್ನರಾಯಪಟ್ಟಣ: ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಯಲು ಮಕ್ಕಳ ಸಂತೆಯಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಲಿವೆ ಎಂದು ಜ್ಞಾನಪ್ರಭ ಇಂಟರ್ನ್ಯಾಷನಲ್ ಶಾಲೆಯ ಅಧ್ಯಕ್ಷ ಎ.ಜಿ.ಪ್ರಭಾಕರ್ ಹೇಳಿದರು.
ತಾಲೂಕಿನ ಹಿರಿಸಾವೆ ಗ್ರಾಮದ ಜ್ಞಾನಪ್ರಭ ಇಂಟರ್ನ್ಯಾಷನಲ್ ಶಾಲಾ ಆವರಣದಲ್ಲಿ ಆಯೋಜಿಸಿದ ಮಕ್ಕಳ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭವಿಷ್ಯದಲ್ಲಿ ಬದುಕನ್ನು ಸುಂದರ ಹಾಗೂ ಸುಭದ್ರವಾಗಿ ಕಟ್ಟಿಕೊಳ್ಳಲು ಶಿಕ್ಷಣದ ಜೊತೆಗೆ ವ್ಯವಹಾರಿಕ ಜ್ಞಾನ ಅಗತ್ಯ ಎಂದರು.
ಮಕ್ಕಳ ಸಂತೆಯಲ್ಲಿ ಹಣ್ಣು-ತರಕಾರಿಗಳು, ಸೊಪ್ಪು, ಜ್ಯೂಸ್, ಐಸ್ ಕ್ರೀಮ್, ಪಾನಿ ಪುರಿ, ಗೋಬಿ, ಕಾಫಿ, ಟೀ ಮತ್ತು ಬಾದಾಮಿ ಹಾಲು, ಸ್ಲಿಪ್ಪರ್, ಮನೆ ಬಳಕೆ ವಸ್ತುಗಳು ಹಾಗೂ ಉತ್ತರ ಕರ್ನಾಟಕ ಶೈಲಿಯ ಉಪಹಾರ ಹಾಗೂ ಊಟ ಸೇರಿದಂತೆ ವಿವಿಧ ವ್ಯಾಪಾರಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಪಾಲ್ಗೊಂಡಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವ್ಯಾಪಾರ ಮಾಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದು ವಿಶೇಷವಾಗಿತ್ತು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎ.ಜಿ.ಪ್ರಭಾಕರ್, ಕಾರ್ಯದರ್ಶಿ ಎಂ.ಕೆ.ಹರೀಶ್, ಪ್ರಾಂಶುಪಾಲ ಬಿ.ಸಂಜಯ್ ಕ್ರಿಸ್ಟೋಫರ್, ಪ್ರಮುಖರಾದ ಜೆಸಿಬಿ ರಾಮು ಹಾಗೂ ಇತರರು ಇದ್ದರು.
A.G. Prabhakar, President of Gyanprabha International School, said that programs like Children's Festival will be very helpful in developing business knowledge among children.










