8.9 C
Munich
Home News ಶಿರಾಡಿಘಾಟ್ ನಲ್ಲಿ ಮಳೆ ಅಬ್ಬರಕ್ಕೆ ಉರುಳಿದ ಮರ: ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್, ಪ್ರಯಾಣಿಕರ ಪರದಾಟ

ಶಿರಾಡಿಘಾಟ್ ನಲ್ಲಿ ಮಳೆ ಅಬ್ಬರಕ್ಕೆ ಉರುಳಿದ ಮರ: ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್, ಪ್ರಯಾಣಿಕರ ಪರದಾಟ

ಹಾಸನ: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ.

ಭಾರಿ ಗಾಳಿ ಸಹಿತ ತಿಂಗಳುಗಳ ನಂತರ ಬಿರುಸಿನ‌ ಮಳೆ ಸುರಿದಿದೆ. ಪರಿಣಾಮ ಮರ ಉರುಳಿದ್ದು ವಾಹನಗಳು ಸಂಚಾರ ಮಾಡಲು ಆಗದ ಸ್ಥಿತಿ ಬಂದಿದೆ.

ಅರಣ್ಯ, ಹೆದ್ದಾರಿ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಮರ ತೆರವಿಗೆ ಯತ್ನ ಆರಂಭಿಸಿದ್ದಾರೆ. ಎರಡು ಗಂಟೆಗೂ ಹೆಚ್ಚುಕಾಲ ವಾಹನಗಳಲ್ಲೆ ಸಿಲುಕಿರುವ ಪ್ರಯಾಣಿಕರು ಪರದಾಡುವಂತಾಗಿದೆ.

error: Content is protected !!