14.6 C
Munich
Home Uncategorized ಹುಡಾ ನೂತನ ಬಡಾವಣೆಯಲ್ಲಿ ಪತ್ರಕರ್ತರಿಗೆ ನಿವೇಶನ ಹಂಚಿಕೆ ಕೋರಿ ಸಚಿವ ಬೈರತಿ ಸುರೇಶ್ ಗೆ ...

ಹುಡಾ ನೂತನ ಬಡಾವಣೆಯಲ್ಲಿ ಪತ್ರಕರ್ತರಿಗೆ ನಿವೇಶನ ಹಂಚಿಕೆ ಕೋರಿ ಸಚಿವ ಬೈರತಿ ಸುರೇಶ್ ಗೆ ಮನವಿ ಸಲ್ಲಿಸಿದ ಹಾಸನ ಪತ್ರಕರ್ತರ ನಿಯೋಗ

ಪತ್ರಕರ್ತರ ಮನವಿಗೆ ಸ್ಪಂದಿಸಿದ ಸಚಿವ| ಕ್ರಮದ ಭರವಸೆ

ಹಾಸನ: ಹುಡಾ ವತಿಯಿಂದ ನಗರ ಹೊರವಲಯದಲ್ಲಿ ನಿರ್ಮಿಸುತ್ತಿರುವ ಬಿಜಿಎಸ್ ಬಡಾವಣೆಯಲ್ಲಿ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡುವಂತೆ ಕೋರಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಇಂದು ಮನವಿ ಸಲ್ಲಿಸಿತು.

ಚಿಕ್ಕಮಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಪತ್ರಕರ್ತರು, ಈ ಹಿಂದೆ ಹುಡಾದಿಂದ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಿದಾಗ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವುದಾಗಿ ಹಿಂದಿನ‌ ಸರ್ಕಾರದಲ್ಲಿ ಭರವಸೆ ಸಿಕ್ಕಿತ್ತು. ಹೀಗಾಗಿ ಹಾಸನದ ಪತ್ರಕರ್ತರು ನಿವೇಶನಕ್ಕೆ ಮುಂಗಡ ಪಾವತಿಸಿ ಅರ್ಜಿ ಸಲ್ಲಿಸಿದ್ದರು.

ಹಾಸನದಲ್ಲಿಯೂ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಗಮನ ಸೆಳೆದಿದ್ದೆವು. ಈಗ ನಿವೇಶನಗಳ ಹಂಚಿಕೆಗೆ ಸಿದ್ಧತೆ ನಡೆದಿದೆ. ಆದ್ದರಿಂದ ತಾವು ಬಿಜಿಎಸ್ ಬಡಾವಣೆಯಲ್ಲಿ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್, ರಾಜ್ಯ ಸಮಿತಿ ಸದಸ್ಯ ಎಚ್.ಬಿ.ಮದನಗೌಡ, ವಿಶೇಷ ಆಹ್ವಾನಿತ ರವಿನಾಕಲಗೂಡು, ಉಪಾಧ್ಯಕ್ಷ ಕೆ.ಎಂ.ಹರೀಶ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಐ. ಖುಷ್ವಂತ್, ಕೆ.ಎಂ.ಮಂಜುನಾಥ್ ಇದ್ದರು.

error: Content is protected !!