23 C
Munich
Home News ಬಿಡದಿ ಟೌನ್ ಶಿಪ್ ಗೆ ವಿರೋಧ: ಜೂ.27 ರಂದು ಅಪ್ಪಿಕೋ ಚಳವಳಿಗೆ ಮುಂದಾದ ರೈತರು

ಬಿಡದಿ ಟೌನ್ ಶಿಪ್ ಗೆ ವಿರೋಧ: ಜೂ.27 ರಂದು ಅಪ್ಪಿಕೋ ಚಳವಳಿಗೆ ಮುಂದಾದ ರೈತರು

ಬಿಡದಿ ಟೌನ್‌ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿಗೆ ಸಜ್ಜಾಗಿರುವ ರಾಮನಗರ ಜಿಲ್ಲೆಯ ರೈತರು.

ರಾಮನಗರ, ಜೂನ್ 25 (www.kannadapost.com): ರಾಜ್ಯ ಸರ್ಕಾರ ನಿರ್ಮಾಣಕ್ಕೆ ಮುಂದಾಗಿರುವ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರಾಮನಗರ ಜಿಲ್ಲೆಯ ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಯೋಜನೆಗೆ ಒಳಪಡುವ ಪ್ರದೇಶದಲ್ಲಿರುವ ಲಕ್ಷಾಂತರ ಮರಗಳನ್ನು ಉಳಿಸುವ ಉದ್ದೇಶದಿಂದ ರೈತರು ಜೂನ್ 27ರಂದು ಅಪ್ಪಿಕೋ ಚಳವಳಿ ನಡೆಸಲು ನಿರ್ಧರಿಸಿದ್ದಾರೆ.

ರಾಮನಗರ ತಾಲ್ಲೂಕಿನ ಬನ್ನಿಗಿರಿ ಗ್ರಾಮದ ಸಮೀಪ ರೈತರು ಅಪ್ಪಿಕೋ ಚಳವಳಿ ನಡೆಸಲಿದ್ದು, “ನಮ್ಮ ಭೂಮಿ ನಮ್ಮ ಹಕ್ಕು” ಹಾಗೂ “10 ಲಕ್ಷ ಮರಗಳನ್ನು ಉಳಿಸಿ” ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದಾರೆ.

ರೈತರ ಪ್ರಕಾರ, ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಲಕ್ಷಾಂತರ ಮರಗಳಿದ್ದು, ಯೋಜನೆ ಜಾರಿಯಾದರೆ ಪರಿಸರಕ್ಕೆ ದೊಡ್ಡ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮರಗಳ ಸಂರಕ್ಷಣೆ ಹಾಗೂ ಕೃಷಿ ಭೂಮಿಯ ಉಳಿವಿಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ ಜೆಡಿಎಸ್ ಪಕ್ಷವೂ ಬೆಂಬಲ ನೀಡಿದ್ದು, ರೈತರ ಪ್ರತಿಭಟನೆಗೆ ಕೈಜೋಡಿಸಿದೆ. ಈ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವೆ ರಾಜಕೀಯ ವಾಗ್ವಾದವೂ ನಡೆದಿತ್ತು.

ರೈತರು ಸರ್ಕಾರವು ಯೋಜನೆ ಕುರಿತು ಮರುಪರಿಶೀಲನೆ ನಡೆಸಿ, ಕೃಷಿ ಭೂಮಿ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!