ಹಾಸನ: ನಗರದ ಪೆನ್ಷನ್ಮೊಹಲ್ಲಾದ ಹುಣಸಿನಕೆರೆ ಕೋಡಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಡಿಸಿಆರ್ಬಿ ಪೊಲೀಸರು ದಾಳಿ ನಡೆಸಿ, ಜೂಜಾಡುತ್ತಿದ್ದ ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ನಡೆದ ಈ ದಾಳಿಯಲ್ಲಿ ಜೂಜಾಟಕ್ಕೆ ಪಣಕ್ಕಿಟ್ಟಿದ್ದ ₹19,99,680 ನಗದು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆಯೇ ಕೆಲವರು ಹಣದ ಸಮೇತ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತರು: ತಮ್ಮಯ್ಯ, ಜಿತೇಂದ್ರ, ಜಲೇಂದ್ರ, ವಿಜಯಕುಮಾರ, ಶಾಂತಪ್ಪ, ಶಶಿಕುಮಾರ, ಅಶೋಕ, ಸರ್ವರ್ಖಾನ್, ಸುಮನ್, ಕುಮಾರ್.
ಡಿಸಿಆರ್ಬಿ ಇನ್ಸ್ಪೆಕ್ಟರ್ ವಿನಯ್ಕುಮಾರ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.










