ವಿ.ಎಚ್.ಪಿ. ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಚಿಕ್ಕಮಗಳೂರು ಜಿಲ್ಲೆ ಭೇಟಿಗೆ ಜಿಲ್ಲಾಡಳಿತ ತಡೆ

Hindu Parishat's regional secretary Sharan Pumpwell has been banned from entering Chikkamagaluru district for one month by the district administration. Deputy Commissioner Meena Nagaraj has issued an order prohibiting his visit to the district until August 4.

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪವೇಲ್‌ ಚಿಕ್ಕಮಗಳೂರು ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ಒಂದು ತಿಂಗಳು ನಿರ್ಬಂಧ ಹೇರಿದೆ. ಆಗಸ್ಟ್‌ 4ರ ತನಕ ಜಿಲ್ಲೆಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಪಂಪ್‌ ವೇಲ್ ಅವರನ್ನು ಜಿಲ್ಲೆಗೆ ಕರೆಸಿ ಬೈಟೆಕ್ ನಡೆಸಲು ಕೆಲ ಸಂಘಟನೆಗಳು ಉದ್ದೇಶಿಸಿರುವ ಮಾಹಿತಿ ಲಭ್ಯವಾಗಿದೆ. ಬಲಪಂಥೀಯ ವಿಚಾರಗಳಿಂದ ಪ್ರಭಾವಿತರಾಗಿ ಕೋಮು ದ್ವೇಷ ಹರಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿ ಕಾನೂನು ಸುವ್ಯವ್ಥೆಗೆ ಧಕ್ಕೆ ತರುವ ಮನೋಭಾವ ಉಳ್ಳವರಾಗಿದ್ದಾರೆ. ಅವರ ವಿರುದ್ಧ ರಾಜ್ಯದ ವಿವಿಧೆಡೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇವರು ಬೈಟೆಕ್‌ಗಳಲ್ಲಿ ಭಾಗವಹಿಸಿದರೆ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಸಂಭವ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಸಲ್ಲಿಸಿದ್ದಾರೆ. ಆದ್ದರಿಂದ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ.