ಸಕಲೇಶಪುರ: ಬಡ ಕುಟುಂಬಗಳಿಗೆ ಧರ್ಮಸ್ಥಳ ಸಂಸ್ಥೆಯಿಂದ ‘ವಾತ್ಸಲ್ಯ’ ಮನೆ

Jana Jagruti Vedike District President Naveen Chandra Shetty said that houses are being built for economically backward poor families under the Dharmasthala Rural Development Project.

ಸಕಲೇಶಪುರ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ  ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುತ್ತಿದೆ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು.

ಶುಕ್ರವಾರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ಗ್ರಾಮದ  ವೃದ್ದೆಗೆ ಸಂಘದ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸರ್ವಾಂಗೀಣ ಅಭಿವೃದ್ದಿಗೆ ಸ್ವಸಹಾಯ ಗುಂಪುಗಳ ಮೂಲಕ ಸಂಸ್ಥೆ ಶ್ರಮಿಸುತ್ತಿದೆ’ ಎಂದರು.

ಸರ್ಕಾರ ಎಲ್ಲವನ್ನು ಮಾಡಲು ಸಾಧ್ಯವಿಲ್ಲ ಆದ್ದರಿಂದ ಯೋಜನೆ ವತಿಯಿಂದ ನೈಜ ಫಲನುಭವಿಗಳನ್ನು ಗುರುತಿಸಿ ಮನೆ ಕಟ್ಟಿಕೊಡುವ ಕೆಲಸ ವಾಗುತ್ತಿದೆ ಎಂದು ತಿಳಿಸಿದರು.

ತಾಲ್ಲೂಕು ಯೋಜನಧಿಕಾರಿ ರಾಜೇಶ್ ಮಾತನಾಡಿ, ವಾತ್ಸಲ್ಯ’ ಯೋಜನೆ ಹೇಮಾವತಿ ಅಮ್ಮನವರ ಕನಸಿನ ಕೂಸು. ನಿರ್ಗತಿಕರಿಗೆ ಸೂರು ಕಲ್ಪಿಸುವ ಮಹತ್ವದ ಯೋಜನೆ ಇದಾಗಿದೆ. 1982 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭವಾಗಿದ್ದು ಕಳೆದ ಎಲೆಂಟು ವರ್ಷಾಗಳಿಂದ ಯಾರು ನಿರ್ಗತಿಕರು ವಸತಿ ರಹಿತರನ್ನು ಹುಡುಕಿ ವಾಸಕ್ಕೆ ಯೋಗ್ಯವಾದ ಮನೆಯನ್ನು ಯೋಜನೆ ಕಡೆಯಿಂದ ನಿರ್ಮಿಸಿ ಕೊಡುತ್ತಿದ್ದೇವೆ.‌ ಗ್ರಾಮದ ಲಕ್ಷಮ್ಮ ಹಾಲಿ ನೆರಿಕೆ ಕಟ್ಟಿಕೊಂಡು ವಾಸ ಮಾಡುತ್ತಿದ್ದು ಮಳೆಗಾಲದಲ್ಲಿ ನೀರು ಸೋರಿಕೆಯಾಗಿ ಜೀವನ ನೆಡೆಸಲು ಕಷ್ಟವಾಗುತ್ತಿತ್ತು ಆದರಿಂದ ನಮ್ಮ ಸಂಘದ ಸದಸ್ಯರು ಮೂಲಕ ಇವರನ್ನು ಗುರುತಿಸಿ ₹1.35 ಲಕ್ಷ ವೆಚ್ಚದಲ್ಲಿ 15×10 ವಿಸ್ತೀರ್ಣದಲ್ಲಿ ವಾಸಿಸಲು ಯೋಗ್ಯವಾದ ಮನೆಯನ್ನು ಕಟ್ಟಿಕೊಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಗಿರೀಶ್, ಗ್ರಾ. ಪಂ ಸದಸ್ಯ ರಾಜೇಶ್, ವಲಯ ಮೇಲ್ವಿಚಾರಕಿ ಜ್ಯೋತಿ, ಸೇವಾ ಪ್ರತಿನಿಧಿ ನಳಿನಿ ರೇವಣ್ಣ, ಜನ ವಿಕಾಸ ಸಂಯೋಜಕಿ ಮಂಜುಳಾ, ಒಕ್ಕೂಟದ ಅಧ್ಯಕ್ಷೆ ಮಂಜುಳಾ ಸೇರಿದಂತೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸದಸ್ಯರುಗಳು, ವಲಯ ಮೇಲ್ವಿಚಾರಕರು, ತಾಲೂಕು ಸಮನ್ವಯಧಿಕಾರಿ, ಸೇವಾಪ್ರತಿನಿಧಿಗಳು, ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.

Jana Jagruti Vedike District President Naveen Chandra Shetty said that houses are being built for economically backward poor families under the Dharmasthala Rural Development Project.