ರತ್ನಖಚಿತ ಸಿಂಹಾಸನ ಜೋಡಣೆ: ಸಿಂಹಾಸನದ ಹಿಂದಿದೆ ದೊಡ್ಡ ಇತಿಹಾಸ

ಅ.೯ಕ್ಕೆ ನಿಗದಿ: ನಂತರ ಖಾಸಗಿ ದರ್ಬಾರ್

ರತ್ನಖಚಿತ ಸಿಂಹಾಸನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯ ಖಾಸಗಿ ದರ್ಬಾರ್ ಹಾಲ್‌ನಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸಲಿದ್ದು, ಇದಕ್ಕಾಗಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಇದೇ ಅಕ್ಟೋಬರ್ ೯ರಂದು ಸಂಪ್ರದಾಯದoತೆ ನಡೆಯಲಿದೆ.
ರಾಜ ದರ್ಬಾರ್‌ಗೆ ಮೈಸೂರು ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದ್ದು, ಅಕ್ಟೋಬರ್ ೯ ರಂದು ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ನಡೆಯಲಿದೆ. ಅರಮನೆಯ ಖಾಸಗಿ ದರ್ಬಾರ್ ಹಾಲ್‌ನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ನಡೆಯಲಿದ್ದು, ಅಂದು ಮುಂಜಾನೆಯಿoದಲೇ ನವಗ್ರಹ, ಗಣಪತಿ ಹೋಮ-ಹವನ ನೆರವೇರಲಿದೆ.
ಅಕ್ಟೋಬರ್ ೧೫ ರಿಂದ ಅರಮನೆಯಲ್ಲಿ ನವರಾತ್ರಿ ಸಂಭ್ರಮ ಆರಂಭವಾಗಲಿದ್ದು, ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿಸಿ ಬ್ರಾಹ್ಮಿ ಮುಹೂರ್ತದಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುವುದು. ಅರಮನೆಯಲ್ಲಿ ಅಕ್ಟೋಬರ್ ೨೦ ರಂದು ಸರಸ್ವತಿ ಪೂಜೆ, ೨೧ ರಂದು ಕಾಳರಾತ್ರಿ ಪೂಜೆ, ೨೩ ರಂದು ಆಯುಧ ಪೂಜೆ, ೨೪ ರಂದು ವಿಜಯದಶಮಿ ಪೂಜೆ ನಡೆಯಲಿದೆ. ಇನ್ನ ನವೆಂಬರ್ ೮ ರಂದು ರತ್ನ ಖಚಿತ ಸಿಂಹಾಸನವನ್ನ ವಿಂಗಡಣೆ ಮಾಡಿ ಭದ್ರತಾ ಕೊಠಡಿಗೆ ರವಾನಿಸಲಾಗುವುದು.
ಜೋಡಣೆಯ ಕ್ರಮ ಹೇಗೆ:
ಪ್ರಮೋದಾದೇವಿ ಒಡೆಯರ್ ಮಾರ್ಗದರ್ಶನ ಸಂಪ್ರದಾಯದoತೆ ಮೈಸೂರು ತಾಲೂಕಿನ ಗೆಜ್ಜಗಳ್ಳಿ ಗ್ರಾಮದ ವೀರಶೈವರು ಮಡಿ ಬಟ್ಟೆತೊಟ್ಟು ದೇವರಿಗೆ ಕೈಮುಗಿದು, ಸಿಂಹಾಸನದ ೬ ಭಾಗಗಳನ್ನು ತಂದು ಅಂಬಾವಿಲಾಸ ರತ್ನಗಂಬಳಿಯ ಮೇಲೆ ೧೫ ಅಡಿ ಅಗಲ ಮತ್ತು ಉದ್ದವಿರುವ ಜಾಗದಲ್ಲಿ ಕೂರ್ಮಾವತಾರ ಆಸನವನ್ನು ಜೋಡಿಸಿ, ಕಾಲುಗಳನ್ನು ಅಳವಡಿಸುವರು. ನಂತರ ಪುರೋಹಿತರು ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಬಿಳಿ ಬಟ್ಟೆಯಿಂದ ಮುಚ್ಚುತ್ತಾರೆ.
ಈ ವೇಳೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರ ಖುದ್ದು ಮಾರ್ಗದರ್ಶನದಲ್ಲಿ ಸಿಂಹಾಸನದ ಜೋಡಣೆ ಕಾರ್ಯವು ಜರುಗಲಿದೆ. ಹಿಂದಿನ ಕಾಲದಲ್ಲಿ ಪ್ರತಿನಿತ್ಯವೂ ಮಹಾರಾಜರು ಸಿಂಹಾಸನವೇರಿ ದರ್ಬಾರ್ ನಡೆಸುತ್ತಿದ್ದರಾದರೂ ನವರಾತ್ರಿ ವೇಳೆ ನಡೆಯುತ್ತಿದ್ದ ದರ್ಬಾರ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇತ್ತು. ಸ್ವಾತಂತ್ರ÷್ಯದ ನಂತರ ನವರಾತ್ರಿ ಸಮಯದಲ್ಲಿ ಖಾಸಗಿಯಾಗಿ ಹಿಂದಿನ ಧಾರ್ಮಿಕ ಕೈಂಕರ್ಯದೊoದಿಗೆ ದರ್ಬಾರ್ ನಡೆಸಲಾಗುತ್ತಿದ್ದು, ಇದು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿದೆ.
ಮೈಸೂರಿನ ಹೆಮ್ಮೆಯ ಪ್ರತೀಕ:
ಮೈಸೂರು ಅರಮನೆಯಲ್ಲಿರುವ ರತ್ನಖಚಿತ ಸಿಂಹಾಸನ ಹಲವು ವೈಶಿಷ್ಟ÷್ಯತೆ ಹೊಂದಿದೆ. ಚಿನ್ನದ ಬಾಳೆಯ ಕಂಬ ಮತ್ತು ಚಿನ್ನದ ಮಾವಿನ ಎಲೆಗಳಿಂದ ಅಲಂಕರಿಸಲ್ಪಟ್ಟಿದ್ದು, ಛತ್ರಿ ತುದಿಯಲ್ಲಿ ಒಡವೆ ಗಳಿಂದ ಅಲಂಕರಿಸಿದ ಪಕ್ಷಿ ಕೂರಿಸಲಾಗಿದೆ. ಸಿಂಹಾಸನವನ್ನೇರುವ ಎರಡು ಬದಿಯಲ್ಲೂ ಸ್ತಿçà ಪುತ್ಥಳಿಯನ್ನು ನಿರ್ಮಿಸಲಾಗಿದೆ. ಜೊತೆಗೆ ಛತ್ರಿಯ ಸುತ್ತಲೂ ಮುತ್ತಿನ ಕುಚ್ಚುಗಳನ್ನು ಕಟ್ಟಲಾಗಿದೆ.
ಸಿಂಹಾಸನ ಕೂರ್ಮರೂಪದ ಆಸನ ಹೊಂದಿದ್ದು, ದಕ್ಷಿಣಭಾಗದಲ್ಲಿ ಕುದುರೆಗಳನ್ನು, ಪಶ್ಚಿಮದಲ್ಲಿ ಕಾಲುದಳವನ್ನು, ಉತ್ತರದಲ್ಲಿ ರಥ ಗಳನ್ನು ಕೆತ್ತಲಾಗಿದೆ. ಸಿಂಹಾಸನದ ದಕ್ಷಿಣದಲ್ಲಿ ಬ್ರಹ್ಮ, ಉತ್ತರದಲ್ಲಿ ಶಿವ, ಮಧ್ಯದಲ್ಲಿ ವಿಷ್ಣುವನ್ನು ನಿಲ್ಲಿಸಲಾಗಿದೆ. ವಿಜಯ ಸೂಚಕ ನಾಲ್ಕು ಸಿಂಹಗಳನ್ನು ಇಡಲಾಗಿದೆ. ಮೂರು ಕೋನಗಳಲ್ಲೂ ರಾಕ್ಷಸ ಶರೀರ, ಎರಡು ಕುದುರೆಗಳು ಮತ್ತು ನಾಲ್ಕು ಹಂಸಪಕ್ಷಿಗಳನ್ನಿಡಲಾಗಿದೆ. ನಾಗದೇವತೆಗಳ ಚಿತ್ರಗಳು, ಸ್ವಸ್ತಿಕ ಆಕೃತಿ ಮತ್ತು ಮುತ್ತಿನ ಹಡಗು ಮೇಲಿನ ಗುಡಾರಗಳ ಚಿತ್ರಣಗಳಿವೆ. ಸಿಂಹಾಸನ ವನ್ನು ನಾಲ್ಕು ದಿಕ್ಕುಗಳಲ್ಲಿ ತೆರೆಯಲಾಗಿದೆ. ಸಿಂಹಾಸನದ ಛತ್ರಿಯ ಮೇಲೆ ಸಂಸ್ಕöದ ೯೬ ಸಾಲುಗಳ ಆಶೀರ್ವಾದ ಪೂರ್ವಕ ಶ್ಲೋಕಗಳಿವೆ.