ಹಾಸನ: ದಲಿತರ ಮೇಲೆ ಹೆಚ್ಚಾಗುತ್ತಿರುವ ದೌರ್ಜನ್ಯ, ಜಾತಿ ವೈಷಮ್ಯ, ಅಸಹಿಷ್ಣುತೆ ಮತ್ತು ಸಂವಿಧಾನ ಮೌಲ್ಯಗಳ ಮೇಲಿನ ದಾಳಿ ಖಂಡಿಸಿ, ಸಮಾಜದಲ್ಲಿ ಶಾಂತಿ ಸಾಮರಸ್ಯ ಕದಡಿ, ಕೋಮುದಳ್ಳುರಿಗೆ ಪ್ರದೋಚನೆ ನೀಡುತ್ತಿರುವ ಆರ್ಎಸ್ಎಸ್ ಹಾಗೂ ಇತರೆ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ನಗರದಲ್ಲಿಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.
ಡಿಸಿ ಕಚೇರಿ ಬಳಿಯಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಿ ನಂತರ ಪ್ರತಿಭಟನಾ ಸಮಾವೇಶ ನಡೆಸಿ ರಾಜ್ಯ-ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹೇರಲಾಯಿತು.
ದಲಿತ ಮುಖಂಡರಾದ ಸಂದೇಶ್, ಕೃಷ್ಣದಾಸ್, ಸೋಮಶೇಖರ್, ಅಂಬುಗ ಮಲ್ಲೇಶ್, ಆರ್.ಪಿ.ಐ ಸತೀಶ್, ಮುಬಾಷಿರ್ ಅಹಮದ್, ಪತ್ರಕರ್ತರಾದ ಹೆತ್ತೂರು ನಾಗರಾಜ್, ರಾಜೇಶ್ ಮೊದಲಾದವರು ಭಾಗಿಯಾಗಿದ್ದರು.










