ಸಕಲೇಶಪುರ: ಈ ಬಾರಿಯೂ ಅದ್ದೂರಿ ಸಕಲೇಶ್ವರಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ- ಶಾಸಕ ಸಿಮೆಂಟ್ ಮಂಜು

MLA Cement Manju said that like every year, this time too the Sakaleshwaraswamy Rathotsava will be celebrated grandly and meaningfully.

ಸಕಲೇಶಪುರ: ಪ್ರತಿ ವರ್ಷದಂತೆ ಈ ಬಾರಿಯು ಸಹ ಸಕಲೇಶ್ವರಸ್ವಾಮಿ ರಥೋತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮುಂಬರುವ ಸಕಲೇಶ್ವರಸ್ವಾಮಿರವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶೀಸಿ ಮಾತನಾಡಿ, ಇಲ್ಲಿನ ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಸುಮಾರು 2000 ವರ್ಷಗಳ ಇತಿಹಾಸವಿದೆ ಹಾಗೂ ಸಾವಿರಾರು ವರ್ಷಗಳಿಂದ ಇಲ್ಲಿ ರಥೋತ್ಸವ ಮಾಡಿಕೊಂಡು ಬರಲಾಗುತ್ತಿದೆ.

ಮೈಸೂರು ಮಹಾರಾಜರು ಸಹ ಈ ದೇವಸ್ಥಾನದ ಜೊತೆ ಸಂಬಂಧ ಹೊಂದಿದ್ದು ಹೀಗಾಗಿ ಕಳೆದ ವರ್ಷದ ರಥೋತ್ಸವಕ್ಕೆ ಮೈಸೂರು ಮಹಾರಾಜರನ್ನು ಕರೆಸುವ ಯತ್ನ ಮಾಡಲಾಗಿತ್ತು. ಆದರೆ ಅವರ ದಿನಾಂಕ ಸಿಗದ ಕಾರಣ ಅವರು ಇಲ್ಲಿಗೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಈ ಬಾರಿ ಸಂಸದ ಯದುವೀರ್ ಅವರನ್ನು ರಥೋತ್ಸವಕ್ಕೆ ಕರೆಸುವ ಎಲ್ಲಾ ಪ್ರಯತ್ನ ಮಾಡೋಣ, ನಾನು ಸಹ ಖುದ್ದಾಗಿ ನಿಮ್ಮ ಜೊತೆ ಅವರನ್ನು ಆಹ್ವಾನಿಸಲು ಬರುತ್ತೇನೆ ಎಂದರು.

ರಥೋತ್ಸವಕ್ಕೆ ಮುಜರಾಯಿ, ಕಂದಾಯ, ಪೋಲಿಸ್, ಸೆಸ್ಕ್ ಸೇರಿದಂತೆ ಎಲ್ಲಾ ಇಲಾಖೆಯವರು ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಉತ್ಸವ ಸಮಿತಿಯ ಸದಸ್ಯರಾಗಿರುವವರು ಕಾರ್ಯಕ್ರಮದ ಆಯೋಜನೆ ಮಾಡಲು ಸಮಯ ಕೊಡಬೇಕು ಯಾರಿಗೆ ಆಸಕ್ತಿ ಇಲ್ಲವೊ ಅಂತಹವರು ತಾವಾಗಿಯೇ ದೂರ ಸರಿದರೆ ಹೊಸ ಸದಸ್ಯರನ್ನು ನೇಮಕ ಮಾಡಬಹುದಾಗಿದೆ.

ಈ ಬಾರಿಯ ಜಾತ್ರಾ ಮಹೋತ್ಸವವನ್ನು ನಡೆಸಲು ದೇವಸ್ಥಾನದ ಉತ್ಸವ ಸಮಿತಿಗೆ ನೀಡಲಾಗುತ್ತಿದೆ. ಬಡವರಿಗೆ ಕೈಗೆಟುಕುವ ದರದಲ್ಲಿ ಜಾತ್ರೆಯನ್ನು ಮಾಡಲಾಗುತ್ತದೆ. ಒಟ್ಟಾರೆಯಾಗಿ ಈ ಬಾರಿಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ಯಾವುದೇ ಗೊಂದಲಗಳಿಲ್ಲದೆ ಅಚ್ಚುಕಟ್ಟಾಗಿ ಮಾಡಲಾಗುವುದು ಎಂದರು.

ಈ ಸಂಧರ್ಭದಲ್ಲಿ ಉಪವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಸುಪ್ರೀತಾ, ತಾ.ಪಂ ಇ.ಒ ಗಂಗಾಧರನ್, ಡಿ.ವೈ.ಎಸ್.ಪಿ ಮಾಲತೀಶ್, ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ, ದೇವಸ್ಥಾನದ ಉತ್ಸವ ಸಮಿತಿಯ ಬ್ಯಾಕರವಳ್ಳಿ ಜಯಣ್ಣ, ನಂದಿಕೃಪ ರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

MLA Cement Manju said that like every year, this time too the Sakaleshwaraswamy Rathotsava will be celebrated grandly and meaningfully.