5.8 C
Munich
Home ಜಿಲ್ಲೆ ಹಾಸನ ಓವರ್ ಆಗಿ ಆಡಬೇಡ… ಒಂದು ಮದ್ಯದಂಗಡಿಗೂ ಅನುಮತಿ ನೀಡಿಲ್ಲ; ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೆಎಂಶಿ-ಸುರೇಶ್ ವಾಕ್ಸಮರ

ಓವರ್ ಆಗಿ ಆಡಬೇಡ… ಒಂದು ಮದ್ಯದಂಗಡಿಗೂ ಅನುಮತಿ ನೀಡಿಲ್ಲ; ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೆಎಂಶಿ-ಸುರೇಶ್ ವಾಕ್ಸಮರ

ಜನಪ್ರತಿನಿಧಿಗಳ ಕಿತ್ತಾಟ ಕಂಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಕಕ್ಕಾಬಿಕ್ಕಿ

ಮೈಸೂರು ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಇರುವ ಕಸ್ತೂರಬಾ ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮದ್ಯದಂಗಡಿ ವಿಚಾರವಾಗಿ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಹಾಗೂ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಕಿತ್ತಾಡಿಕೊಂಡರು.

ಅರಸೀಕೆರೆ: ನಗದಲ್ಲಿಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಂ.ಶಿವಲಿ0ಗೇಗೌಡ ಹಾಗೂ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಪರಸ್ಪರ ಕಚ್ಚಾಡಿದ ಘಟನೆ ನಡೆಯಿತು.
ನಗರದ ಮೈಸೂರು ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಇರುವ ಕಸ್ತೂರಬಾ ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮದ್ಯದಂಗಡಿ ವಿಚಾರವಾಗಿ ಶಾಸಕರು ಕಿತ್ತಾಡಿಕೊಂಡರು.
ಇಬ್ಬರು ಜನಪ್ರತಿನಿಧಿಗಳ ಕಿತ್ತಾಟ ಕಂಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಕಕ್ಕಾಬಿಕ್ಕಿಯಾದರು.
ಕರುಗುಂದ ಗ್ರಾಮದಲ್ಲಿ ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತಕೊಳ್ಳುತ್ತಿದ್ದಾರೆ ಎಂದು ಸುರೇಶ್ ಭಾಷಣ ಮಾಡಿದರು.
ಇದಕ್ಕೆ ಉತ್ತರ ನೀಡಲು ಮುಂದಾದ ಶಿವಲಿಂಗೇಗೌಡ, ಜನ ಸೇರಿಸುವವನು ನಾನು, ನೀನು ೧೫ ಜನ ಕರೆತಂದು ಸಭೆ ಹಾಳು ಮಾಡಲು ಬಂದಿದ್ದೀಯಾ ಎಂದು ಕಿಡಿಕಾರಿದರು.
ಇದಕ್ಕೆ ಸಿಟ್ಟಾದ ಸುರೇಶ್, ನನಗೂ ಜಾವಗಲ್ ಗ್ರಾಮ ಸೇರುತ್ತೆ, ನನಗೂ ಹಕ್ಕಿದೆ ಎಂದು ಆಕ್ರೋಶ ಹೊರಹಾಕಿದರು.
ಮದ್ಯದಂಗಡಿ ತೆರೆದಿರುವವನು ಶಿವಲಿಂಗೇಗೌಡರ ಸ್ನೇಹಿತ ಎಂದು ಸುರೇಶ್ ಮೈಕಲ್ಲಿ ಹೇಳಿದರು. ಇದರಿಂದ ಕೆರಳಿದ ಶಿವಲಿಂಗೇಗೌಡ, ಓವರ್ ಆಗಿ ಆಡಬೇಡ. ನಮ್ಮ ಸರ್ಕಾರ ಬಂದು ಐದು ತಿಂಗಳು ಆಯ್ತು ಒಂದು ಮದ್ಯದಂಗಡಿಗೂ ಅನುಮತಿ ನೀಡಿಲ್ಲ. ಕಳೆದ ಸರ್ಕಾರದಲ್ಲೇ ಮದ್ಯದಂಗಡಿ ತೆರೆದಿದ್ದಾರೆ ಎಂದರು. ಈ ವೇಳೆ ಕಾರ್ಯಕರ್ತರು ಶಿವಲಿಂಗೇಗೌಡರ ಪರ ಜೈಕಾರ ಕೂಗಿದರು. ಮತ್ತೊಂದೆಡೆ ಸುರೇಶ್ ಪರವೂ ಜೈಕಾರ ಮೊಳಗಿತು.
ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಶಾಸಕರನ್ನು ಸಮಾಧಾನಪಡಿಸಿದರು.
ಶಿವಲಿಂಗೇಗೌಡರು ಶಕ್ತಿವಂತರಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಅವರ ಕ್ಷೇತ್ರದಲ್ಲಿ ನೂರು ಕೋಟಿ ಕೆಲಸ ನಡೆಯುತ್ತಿದೆ ಎಂದು ಸುರೇಶ್ ಭಾಷಣ ಮಾಡಿದರು. ಅರಸೀಕೆರೆ ತಾಲ್ಲೂಕಿಗೆ ನನ್ನ ಬೇಲೂರು ವಿಧಾನಸಭಾ ಕ್ಷೇತ್ರದ ಜಾವಗಲ್ ಹೋಬಳಿ ಸೇರುತ್ತೆ. ಜಾವಗಲ್ ಹೋಬಳಿಯಲ್ಲಿ ೧ ಕೋಟಿ ಕೆಲಸವೂ ನಡೆಯುತ್ತಿಲ್ಲ ಎಂದು ದೂರಿದರು.
ಯಾಕೆ ಸ್ವಾಮಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ನನಗೆ ನೂರು ಕೋಟಿ ಬೇಡ ೫೦ ಕೋಟಿ ಕೊಡಿ ಸ್ವಾಮಿ ಎಂದು ಸುರೇಶ್ ಕೇಳಿದರು. ಇದರಿಂದ ಮತ್ತಷ್ಟು ಸಿಟ್ಟಾದ ಶಿವಲಿಂಗೇಗೌಡ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಇದೆಲ್ಲವೂ ಸಚಿವ ಕೆ.ಎನ್.ರಾಜಣ್ಣ ಎದುರೇ ನಡೆಯಿತು.

ಟಾಕ್ ಫೈಟ್‌ಗೆ ಕಾರಣ ಏನು:
ಮೊದಲು ಭಾಷಣ ಮಾಡಿದ ಶಿವಲಿಂಗೇಗೌಡ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೊಬ್ಬರಿಗೆ ಬೆಂಬಲ ಬೆಲೆ ನೀಡುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಟೀಕಿಸಿದರು. ನಂತರ ಮಾತನಾಡಿದ ಸುರೇಶ್, ಶಿವಲಿಂಗೇಗೌಡರ ಎಲ್ಲಾ ಆರೋಪಗಳಿಗೆ ಟಾಂಗ್ ನೀಡಿದರು. ರಾಜ್ಯ ಸರ್ಕಾರವೂ ಕೊಬ್ಬರಿಗೆ ೫ ಸಾವಿರ ಬೆಂಬಲ ಹಣ ನೀಡಲಿ ಎಂದು ಆಗ್ರಹಿಸಿದರು. ಇದಕ್ಕೆ ಮತ್ತೆ ಉತ್ತರ ಕೊಡಲು ಶಿವಲಿಂಗೇಗೌಡ ಮುಂದಾದಾಗ, ಮತ್ತೊಂದು ಮೈಕ್ ಹಿಡಿದು ಸುರೇಶ್ ಮಾತನಾಡಲು ಮುಂದಾದರು. ಆಗ ಇಬ್ಬರೂ ಒಂದೊAದು ಮೈಕ್ ಹಿಡಿದು ಮಾತಿಗೆ ಮಾತು ನೀಡಲು ಮುಂದಾದರು. ಶಿವಲಿಂಗೇಗೌಡರು ಒಬ್ರೇ ಅಲ್ಲ ಶಾಸಕ, ನಾನೂ ಈ ತಾಲ್ಲೂಕಿನ ಶಾಸಕ, ಜಾವಗಲ್ ನನಗೂ ಬರುತ್ತೆ ಎಂದರು. ಇದಕ್ಕೆ ಏಕವಚನದಲ್ಲಿ ಕೆಎಂಶಿ ವಾಗ್ದಾಳಿ ನಡೆಸಿದರು. ನಿಮ್ಮ ಸರ್ಕಾರದ ಅವಧಿಯಲ್ಲೇ ಹೆಚ್ಚು ಮದ್ಯದಂಗಡಿಗೆ ಮಂಜೂರಾತಿ ಕೊಟ್ಟಿದ್ದು ಎಂದು ಕೆಎಂಶಿ ತಿರುಗೇಟು ನೀಡಿದರು.

error: Content is protected !!