19.5 C
Munich
Home News Politics ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ ಎಂದರು ಸಂಸದ ಶ್ರೇಯಸ್ ಪಟೇಲ್

ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ ಎಂದರು ಸಂಸದ ಶ್ರೇಯಸ್ ಪಟೇಲ್

ಹಾಸನ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ ಎಂಬ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆ ಕುರಿತಂತೆ ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯೆ ನೀಡಿದ್ದಾರೆ.

“ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ ಎಂದು ರಾಜಣ್ಣ ಅವರು ಹೇಳಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ವೈಯುಕ್ತಿಕವಾಗಿ ಅವರು ನಮಗೆ ಆ ರೀತಿ ಹೇಳಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಬಂದಾಗಿನಿಂದಲೂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ, ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ.”

ಅಭಿವೃದ್ಧಿ ಕಾರ್ಯಗಳ ವಿವರ:

  • ಹಾಸನ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಹಣ ಬಿಡುಗಡೆಗೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಪಡೆಯಲಾಗಿದೆ.
  • ಹಾಸನ ನಗರಸಭೆಯನ್ನು ಮಹಾನಗರಪಾಲಿಕೆಯಾಗಿಸಲು ಕ್ರಮ ಕೈಗೊಳ್ಳಲಾಗಿದೆ.

“ನನ್ನ ಗಮನಕ್ಕೆ ಬಂದಂತೆ, ಅವರು ನಾನು ಹೊರಗೆ ಹೋಗುತ್ತೇನೆ ಎಂಬಂತದ್ದು ಎಂದಿಗೂ ಹೇಳಿಲ್ಲ. ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ ಎಂದು ನಾನು ಆಶಿಸುತ್ತೇನೆ,” ಎಂದು ಶ್ರೇಯಸ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.

ದಲಿತರ ಸಮಾವೇಶ ಕುರಿತು:

  • “ಪಕ್ಷ ಹಾಗೂ ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ದರಾಗಿರುತ್ತೇವೆ.”
  • “ಪಕ್ಷದ ಹಿತದೃಷ್ಟಿಯಿಂದ ಸಮಾವೇಶವನ್ನು ಆಯೋಜಿಸಬಹುದು.”
  • “ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಎಷ್ಟು ಸಮಾವೇಶಗಳನ್ನು ಮಾಡಿದರೂ ನಾವು ಪೂರಕವಾಗಿ ಒಪ್ಪಿಕೊಳ್ಳಬೇಕು.”
  • “ನಮ್ಮ ಪಕ್ಷದಲ್ಲಿ ತತ್ವ ಮತ್ತು ಸಿದ್ಧಾಂತದ ಆಧಾರದ ಮೇಲೆ ತೀರ್ಮಾನಗಳನ್ನು ಮಾಡಲಾಗುತ್ತದೆ.”
  • “ಪಕ್ಷ ಸಂಘಟನೆಯ ಉದ್ದೇಶದಿಂದ ಯಾವುದೇ ರೀತಿಯ ಸಮಾವೇಶಗಳನ್ನು ನಡೆಸಿದರೂ ತಪ್ಪಲ್ಲ.”

 

error: Content is protected !!