ಸಕಲೇಶಪುರ sakaleshpura | ಕನ್ನಡಪೋಸ್ಟ್ ವರದಿ
ಸಕಲೇಶಪುರ: ತಾಲೂಕಿನ ಬಾಗೆ ಗ್ರಾಮ ಪಂಚಾಯತಿಯ ಪಿಡಿಓ ಚಿನ್ನಸ್ವಾಮಿ ಅವರನ್ನು ಅರಕಲಗೂಡು ತಾಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಪ್ರತಿಭಟನೆ ಬಳಿಕ ವರ್ಗಾವಣೆ
ಪಿಡಿಓ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ
👉 ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಗುರುವಾರದಿಂದ ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಆರಂಭಿಸಿದ್ದರು.
ಈ ಬೆಳವಣಿಗೆಯ ನಡುವೆಯೇ ವರ್ಗಾವಣೆಯ ಆದೇಶ ಹೊರಬಿದ್ದಿದೆ.

ಹೆಬ್ಬಾಲೆಗೆ ನಿಯೋಜನೆ
ಬಾಗೆ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಿನ್ನಸ್ವಾಮಿ ಅವರನ್ನು
👉 ಅರಕಲಗೂಡು ತಾಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ.










