ಬೆಂಗಳೂರು: ಯೂರಿಯಾ ಕಾಳಸಂತೆ ಬಹಿರಂಗ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ – ಆರ್. ಅಶೋಕ ಆರೋಪ

The BJP has launched a scathing attack on the state government after the Directorate of Revenue Intelligence (DRI) officials seized a large quantity of urea fertilizer being sold in the black market.

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ಪ್ರಮಾಣದ ಯೂರಿಯಾ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನೆಲಮಂಗಲ ಬಳಿ ವಶಪಡಿಸಿಕೊಂಡಿರುವ ಯೂರಿಯಾ ರಾಜ್ಯದಲ್ಲಿ ನಡೆದಿರು ಬೃಹತ್ ಯೂರಿಯಾ ಹಗರಣವನ್ನು ಬಹಿರಂಗಗೊಳ್ಳುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.

ನಮ್ಮ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾವನ್ನು ಒದಗಿಸುತ್ತಿಲ್ಲ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ಆರೋಪಿಸುತ್ತಿದೆ. ಆದರೆ, ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಬಹಿರಂಗಗೊಂಡಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವು ರೈತರಿಗೆ ಯೂರಿಯಾವನ್ನು ಕೆಜಿಗೆ 280 ರೂ. ಸಬ್ಸಿಡಿ ಬೆಲೆಯಲ್ಲಿ ನೀಡುತ್ತಿದೆ. ಆದರೆ, ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

The BJP has launched a scathing attack on the state government after the Directorate of Revenue Intelligence (DRI) officials seized a large quantity of urea fertilizer being sold in the black market.