ಹಾಸನ:ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಮುಖ್ಯಮಂತ್ರಿಗಳಿಗೆ ವಿನರ್ಮಪೂರ್ವ ವಿನಂತಿ ಮಾಡುತ್ತೇನೆ.
ಟ್ರಕ್ ಹರಿದು ಗಾಯಗೊಂಡು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ವಿನರ್ಮಪೂರ್ವ ವಿನಂತಿ ಮಾಡುತ್ತೇನೆ ಎಂದು ಮಾಜಿಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆಯಲ್ಲಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲು ನಾನು ಕೂಡ ಒತ್ತಡ ಹಾಕುತ್ತೇನೆ. ಚಿಕಿತ್ಸಾ ವೆಚ್ಚ ಭರಿಸಿ ಮಾನವೀಯತೆ ಪ್ರದರ್ಶಿಬೇಕು ಎಂದರು. ಹಿಂದೂತ್ವದ ಭಾವ ಬೆಳೆಸದೆ ಇದ್ದರೆ ದೇಶ ಉಳಿಸಿಕೊಳ್ಳಲು ಆಗಲ್ಲ.










