ಹಾಸನ: ಅಖಿಲ ಭಾರತ ಸರ್ಕಾರಿ ನೌಕರರ ಫುಟ್ಬಾಲ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಸಕಲೇಶಪುರ ತಾಲೂಕಿನ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆಯ್ಕೆಯಾಗಿದ್ದಾರೆ.
ಆನೆಮಹಲ್ ಗ್ರಾಪಂ ಪಿಡಿಒ ವೇಣುಗೋಪಾಲ್ ಹಾಗೂ ಹಾನುಬಾಳು ಗ್ರಾಪಂ ಪಿಡಿಒ ಕೆ. ಹರೀಶ್ ಕರ್ನಾಟಕ ಸರ್ಕಾರಿ ನೌಕರರ ಫುಟ್ಬಾಲ್ ತಂಡದಲ್ಲಿ ಸ್ಥಾನಗಿಟ್ಟಿಸಿದ್ದಾರೆ.
ಈಗಾಗಲೇ ಹಲವಾರು ಟೂರ್ನಿಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಪ್ರಮುಖ ಫುಟ್ಬಾಲ್ ಆಟಗಾರರಾಗಿ ಗುರುತಿಸಿಕೊಂಡಿರುವ ಅವರನ್ನು ಸ್ನೇಹಿತರು, ಸಹೋದ್ಯೋಗಿಗಳು ಅಭಿನಂದಿಸಿದ್ದಾರೆ.










